BhandaryVarthe Team

BhandaryVarthe Team
Bhandary Varthe Team

Saturday 15 May 2021

ಪುತ್ತೂರು ತಾಲೂಕು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಬಡ್ತಿ ಗೊಂಡ ಶ್ರೀ ವಿಜಯೇಂದ್ರ ಬಿ . ಅಧಿಕಾರ ಸ್ವೀಕಾರ

 ಬೆಳ್ತಂಗಡಿ ತಾಲೂಕು ನಾವೂರ ಗ್ರಾಮದ ದಿವಂಗತ ಬಾಬು ಭಂಡಾರಿ ಮತ್ತು ಶ್ರೀಮತಿ ಲೀಲಾವತಿ ಬಾಬು ಭಂಡಾರಿ ದಂಪತಿಯ ಪುತ್ರ ಶ್ರೀ ವಿಜಯೇಂದ್ರ ಬಿ. ಅವರು ಮೇ 14 ನೇ ಶುಕ್ರವಾರದಂದು ಪುತ್ತೂರು ತಾಲೂಕು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಬಡ್ತಿ ಹೊಂದಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

1993 ರ ನವೆಂಬರ್ ತಿಂಗಳಿನಲ್ಲಿ ಪೊಲೀಸ್ ಇಲಾಖೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಸೇವೆಗೆ ನಿಯುಕ್ತಿಗೊಂಡರು . ಅಲ್ಲಿಂದ ಮಂಗಳೂರು ಪಶ್ಚಿಮ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ 6ವರ್ಷ ಕರ್ತವ್ಯ ನಿರ್ವಹಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 8 ವರ್ಷ ಕಾರ್ಯನಿರ್ವಹಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡರು ಅಲ್ಲಿ 4ವರ್ಷ ಸೇವೆ ಸಲ್ಲಿಸಿದಾಗ ಇವರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಸರಕಾರ ಬಡ್ತಿ ನೀಡಿ ಬಂಟ್ವಾಳ ನಗರ ಠಾಣೆಗೆ ಹೆಡ್ ಕಾನ್ ಸ್ಟೇಬಲ್ ಆಗಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಅಧಿಕಾರ ಸ್ವೀಕರಿಸಿ 6ವರ್ಷ ಕರ್ತವ್ಯ ನಿರ್ವಹಿಸಿದರು. ಅಲ್ಲಿಂದ ಕಳೆದ ಎರಡು ವರ್ಷದಿಂದ ವೇಣೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು ಇಲಾಖೆಯಲ್ಲಿ ಅತ್ಯಂತ ಶಿಸ್ತುಬದ್ಧವಾಗಿ ಮತ್ತು ನಿಷ್ಠೆಯಿಂದ ಪ್ರಾಮಾಣಿಕ ಸೇವೆಯನ್ನು ಗುರುತಿಸಿದ ಕರ್ನಾಟಕ ಸರಕಾರ ಪೊಲೀಸ್ ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಬಡ್ತಿ ನೀಡಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಇದೀಗ ವರ್ಗಾವಣೆಗೊಳಿಸಿದೆ.

ಶುಕ್ರವಾರದಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ವಿಜಯೇಂದ್ರ ಬಿ ಅವರು ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಾರ್ವಜನಿಕರ ದೂರು ದುಮ್ಮಾನಗಳಿಗೆ ಪ್ರಾಮಾಣಿಕತೆಯಿಂದ ಸ್ಪಂದಿಸುವ ಮನೋಭಾವ ಹೊಂದಿರುವ ವಿಜಯೇಂದ್ರ ಅವರು ಅತ್ಯುತ್ತಮ ಪೊಲೀಸ್ ಅಧಿಕಾರಿಯೇಂದೇ ಜನಮನ್ನಣೆ ಗಳಿಸಿದ್ದಾರೆ .


ವಿಜಯೇಂದ್ರ ಪತ್ನಿ ಶ್ರೀಮತಿ ಮಮತಾ ವಿಜಯೇಂದ್ರ ಮತ್ತು ಅಡ್ಯಾರು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ BE ವ್ಯಾಸಂಗ ಮಾಡುತ್ತಿರುವ ಪುತ್ರ ಅಂಕಿತ್ ಹಾಗೂ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಪ್ರಥಮ ವರ್ಷದ BSc ವ್ಯಾಸಂಗ ಮಾಡುತ್ತಿರುವ ಪುತ್ರಿ ಅನನ್ಯ ಅವರೊಂದಿಗೆ ಸಂತೃಪ್ತಿ ಜೀವನ ನಡೆಸುತ್ತಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಉತ್ತಮ ಸಾಧನೆ ಮಾಡಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂಬ ಹೆಸರು ಗಳಿಸಿ ಇನ್ನೂ ಉನ್ನತ ಹುದ್ದೆಯನ್ನು ಅಲಂಕರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆಯು ಶುಭ ಹಾರೈಸುತ್ತದೆ.

-ಭಂಡಾರಿ ವಾರ್ತೆ

1 comment: