BhandaryVarthe Team

BhandaryVarthe Team
Bhandary Varthe Team

Sunday 15 August 2021

ಮೌಢ್ಯದಿಂದ ಬಿಡುಗಡೆ, ದುಃಖದಿಂದ ಬಿಡುಗಡೆ- ಜಿಡ್ಡುಪ್ರವಚನ ಧ್ಯಾನ- 4

  ಒಂದು ಪರಂಪರೆಯನ್ನು ಕಡಿದುಕೊಂಡು ಇನ್ನೊಂದು ಪರಂಪರೆಗೆ ಬದ್ಧರಾಗುವುದುಒಬ್ಬ ನಾಯಕನನ್ನು ಬಿಟ್ಟು ಇನ್ನೊಬ್ಬನನ್ನು ಹಿಂಬಾಲಿಸುವುದು ಇವೆಲ್ಲ ತೋರಿಕೆಯ ಭಂಗಿಗಳುಅಧಿಕಾರದ (ಪೂರ್ವಗ್ರಹಬಗ್ಗೆ ಇಡಿಯಾದ ಎಚ್ಚರವನ್ನು ಪಡೆಯಬೇಕೆಂದಿದ್ದರೆ,ಅಧಿಕಾರ ನಮ್ಮೊಳಗೆ ಹೇಗೆ ಇದೆ ಎಂದು ಅರಿಯಬೇಕೆಂದಿದ್ದರೆಖಚಿತತೆಯ ಆಸೆಯನ್ನು ಮೀರಬೇಕೆಂದಿದ್ದರೆ,ಆಗ ನಮಗೆ ಅಗಾಧವಾದ ಎಚ್ಚರ ಮತ್ತು ಒಳನೋಟ ಬೇಕಾಗುತ್ತದೆಇದು ಸಾಧ್ಯವಾಗಬೇಕಾದರೆ ನಾವು ಇನ್ನು ಎಂದೋ,ನಮ್ಮ ಬದುಕಿನ ಕೊನೆಗೆ ಅಲ್ಲ,' ಈಗಲೇಇಂದೇ,ಮೊದಲಿಗೇ ಬಿಡುಗಡೆಯನ್ನು ಪಡೆಯಬೇಕಾಗುತ್ತದೆ'.



ನಾವು ಮನಸ್ಸಿನ ತುಂಬ ಆಸೆಗಳನ್ನಿಟ್ಟುಕೊಂಡುಭಯಗಳನ್ನು ತುಂಬಿಕೊಂಡು ಕೇಳುತ್ತೇವೆಬೆಳಕು ಕಂಡಿರುವ ವ್ಯಕ್ತಿ ಯಾರು ಎಂದು ಹುಡುಕುತ್ತೇವೆಅಂಥವರಿಂದ ಬೆಳಕು ಪಡೆಯಲು ಬಯಸುತ್ತೇವೆಆದರೆ ಅರ್ಥಮಾಡಿಕೊಳ್ಳುವುದಕ್ಕೆ ಬೇಕಾದ ನಿಷ್ಕ್ರಿಯ ಎಚ್ಚರ ನಮ್ಮಲ್ಲಿರುವುದಿಲ್ಲಮುಕ್ತನಾಗಿರುವ  ವ್ಯಕ್ತಿ ನಮ್ಮ ಆಸೆಗಳನ್ನು ಪೂರೈಸುವಂತೆ ಕಂಡರೆ ಆತನನ್ನು ಒಪ್ಪಿಕೊಳ್ಳುತ್ತೇವೆಇಲ್ಲದಿದ್ದರೆ ಮತ್ತೊಬ್ಬ ವ್ಯಕ್ತಿ ಎಲ್ಲಿದ್ದಾನೆ ಎಂದು ಹುಡುಕಲು ತೊಡಗುತ್ತೇವೆನಮ್ಮಲ್ಲಿ ಬಹಳ ಜನಕ್ಕೆ ಬೇರೆ ಬೇರೆ ಹಂತಗಳ ತೃಪ್ತಿ ಬೇಕಾಗಿರುತ್ತದೆಮುಕ್ತಾತ್ಮನನ್ನು ಹುಡುಕುವುದು ಕಂಡುಕೊಳ್ಳುವುದು ಮುಖ್ಯವಲ್ಲನಿಮ್ಮನ್ನು ನೀವು ಅರ್ಥಮಾಡಿಕೊಳ್ಳುವುದೇ ಮುಖ್ಯವಾದದ್ದು. ಲೋಕದ ಅಥವಾ ಪರಲೋಕದ ಯಾವ ಅಧಿಕಾರವೂ ನಿಮಗೆ ನಿಮ್ಮ ಬಗ್ಗೆ ತಿಳಿವಳಿಕೆಯನ್ನು ಕೊಡಲಾರದುನಿಮ್ಮ ಬಗ್ಗೆ ನೀವು ತಿಳಿಯದಿದ್ದರೆ ಮೌಢ್ಯದಿಂದ ,ದುಃಖದಿಂದ ಬಿಡುಗಡೆಯೂ ದೊರೆಯಲಾರದು.
ನಮ್ಮನ್ನು ನಾವು ತಿಳಿಯುವುದು ಬಹಳ ಶ್ರಮದ ಕೆಲಸನಮಗೆ ಯಾವಾಗಲೂ ಸುಲಭವಾದ ದಾರಿ ಬೇಕುಭ್ರಮೆಯ ದಾರಿ ಬೇಕು.ಅದ್ದರಿಂದ ನಮ್ಮ ಬದುಕಿಗೆ ಒಂದು ವಿನ್ಯಾಸವನ್ನುಆಕಾರವನ್ನು ಒದಗಿಸಿಕೊಡುವ ಅಧಿಕಾರವನ್ನು (ಪದ್ಧತಿಯ ಹಿಡಿತವಿರುವ ಮನಸ್ಸುಸೃಷ್ಟಿಸಿಕೊಳ್ಳುತ್ತೇವೆ ಅಧಿಕಾರ ಸಾಮೂಹಿಕ ಸ್ವರೂಪದ್ದಾಗಿರಬಹುದುರಾಜ್ಯಾಧಿಕಾರದಂತೆವೈಯುಕ್ತಿಕ ಸ್ವರೂಪದ್ದಾಗಿರಬಹುದುಒಡೆಯರಕ್ಷಕಗುರುಎಂಬಂತೆಯಾವುದೇ ಬಗೆಯ ಅಧಿಕಾರ ನಮ್ಮನ್ನು ಕುರುಡು ಮಾಡುತ್ತದೆಆಲೋಚನೆ ಮಾಡುವುದನ್ನು ತಪ್ಪಿಸುತ್ತದೆ‌. ನಮ್ಮಲ್ಲಿ ಬಹುಪಾಲು ಜನಕ್ಕೆ ಆಲೋಚನೆ ಬಹಳ ನೋವಿನ ಕೆಲಸವಾದ್ದರಿಂದ ನಮ್ಮನ್ನು ನಾವು ಸುಮ್ಮನೆ ಅಧಿಕಾರಕ್ಕೆ ಒಪ್ಪಿಸಿಕೊಂಡು ಬಿಡುತ್ತೇವೆಸ್ವಯಂ ಅರಿವಿಲ್ಲದವನಲ್ಲಿ ಒಪ್ಪಿಸಿಕೊಳ್ಳುವುದರಿಂದಅಧಿಕಾರ ಹೊಂದಿರುವವನನ್ನು ಮಾತ್ರವಲ್ಲದೆ ಹಿಂಬಾಲಕರನ್ನು ಭ್ರಷ್ಟಗೊಳಿಸುತ್ತದೆ‌. ಜ್ಞಾನ ಮತ್ತು ಅನುಭವದ ಅಧಿಕಾರಅದು ಒಡೆಯನ್ನಲ್ಲಿರಲಿಒಡೆಯನ ಪ್ರತಿನಿಧಿಯಲ್ಲಿರಲಿಗುರುವಿನಲ್ಲಿಅಥವಾ ಪೂಜಾರಿಯಲ್ಲಿರಲಿವಿಕೃತವಾದದ್ದು‌. ನಿಮ್ಮ ನಿಮ್ಮ ಸ್ವಂತ ಬದುಕುನಿಮ್ಮ ಸ್ವಂತ ಅರಿವು ಇಲ್ಲಿ ಮುಖ್ಯಅಧಿಕಾರಯುತ ವ್ಯಕ್ತಿಗಳು ನಿಮ್ಮನ್ನು ಅರಿವಿನಿಂದ ದೂರ ದೂರ ಒಯ್ಯುತ್ತಾರೆ ನಿಮ್ಮನ್ನು…  ನಾವು ಬೇರೆಯವರನ್ನು ಒಪ್ಪಿಕೊಳುವುದ ಏಕೆ ? ಇನ್ನೊಬ್ಬರ ಅಧಿಕಾರವನ್ನುಜ್ಞಾನವನ್ನು ಒಪ್ಪಿ ಹಿಂಬಾಲಿಸುತ್ತೇವೆಆನಂತರ ಅದರ ಬಗ್ಗೆ ಅನುಮಾನಪಡುತ್ತೇವೆಅಧಿಕಾರಕ್ಕಾಗಿ ನಡೆಸುವ ಹುಡುಕಾಟದ ಜೊತೆಜೊತೆಗೆ ಭ್ರಮನಿರಸನವೋ ಆಗುತ್ತಿರುತ್ತದೆಇದು ಬಹಳ ನೋವಿನ ಅನುಭವನಾವು ಒಮ್ಮೆ ಒಪ್ಪಿಕೊಂಡ ಅಧಿಕಾರವನ್ನುನಾಯಕನನ್ನುಗುರುವನ್ನು ನಿಂದಿಸುತ್ತೇವೆಆದರೆ ನಮ್ಮೊಳಗೆ ಇದ್ದು ನಮ್ಮ ವರ್ತನೆಗೆ ಕಾರಣವಾಗಿರುವ ಅಧಿಕಾರದ ಹಂಬಲವನ್ನು ಪರಿಶೀಲಿಸಿಕೊಳ್ಳುವುದೇ ಇಲ್ಲ ಹಂಬಲವನ್ನು ಒಮ್ಮೆ ಅರ್ಥಮಾಡಿಕೊಂಡರೆ ಸಂಶಯದ ಮಹತ್ವ ನಮಗೆ ತಿಳಿಯುತ್ತದೆಹಳೆಯ ಜ್ಞಾನವೆಂಬ ಅಧಿಕಾರ ಅಥವಾ ಮೌಢ್ಯದಿಂದ ಮುಕ್ತವಾಗಿ ನಮ್ಮನ್ನು ನಾವು ಕಂಡುಕೊಂಡಾಗ ದುಃಖದಿಂದ ಬಿಡುಗಡೆ ದೊರೆಯುತ್ತದೆ...

(ಮುಂದುವರಿಯುತ್ತದೆ)









ಮೂಲ: ಜಿಡ್ಡು ಕೃಷ್ಣಮೂರ್ತಿ ಪುಸ್ತಕಗಳು
: ಕಣಬ್ರಹ್ಮವೆಂಕಿ (ವೆಂಕಟೇಶ ಭಂಡಾರಿ ಕುಂದಾಪುರ )

No comments:

Post a Comment