BhandaryVarthe Team

BhandaryVarthe Team
Bhandary Varthe Team

Monday 30 August 2021

ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ -ಗ್ರೀಷ್ಮಾ ಭಂಡಾರಿ

 ಶ್ರೀಕೃಷ್ಣನ ಜನ್ಮದಿನವನ್ನು ಪವಿತ್ರ ಶ್ರಾವಣ ಮಾಸದಲ್ಲಿ ಆಚರಿಸಲಾಗುತ್ತದೆ. ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ ಮತ್ತು ದಕ್ಷಿಣ ಭಾರತದ ಅನೇಕ ಭಾಗಗಳಲ್ಲಿ ಜನ್ಮಾಷ್ಟಮಿಯನ್ನು ವ್ಯಾಪಕವಾಗಿ ಆಚರಿಸಲಾಗುತ್ತದೆ.

ಜನ್ಮಾಷ್ಟಮಿ ಹಿಂದಿನ ಪೌರಾಣಿಕ ಕಥೆ
ಎಲ್ಲಾ ಪೌರಾಣಿಕ ಹಬ್ಬಗಳಂತೆ, ಜನ್ಮಾಷ್ಟಮಿಯ ಹಿಂದೆಯೂ ಒಂದು ಕುತೂಹಲಕಾರಿ ಕಥೆ ಇದೆ. ದಂತಕಥೆಯ ಪ್ರಕಾರ, ಮಥುರಾ ಸಾಮ್ರಾಜ್ಯವು ಕಂಸ ರಾಜನ ಆಳ್ವಿಕೆಯಲ್ಲಿ ಸೊರಗಿಹೋಗಿತ್ತು. ಅವನು ಸಾಕಷ್ಟು ಕ್ರೂರನಾಗಿದ್ದನು. ರಾಜನು ತನ್ನ ಸಹೋದರಿ ರಾಜಕುಮಾರಿ ದೇವಕಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದನು. ಬಳಿಕ ದೇವಕಿ ವಾಸುದೇವನನ್ನು ಮದುವೆಯಾದಾಗ, ಪ್ರಬಲವಾದ ಮೋಡವು ಇದ್ದಕ್ಕಿದ್ದಂತೆ ಭವಿಷ್ಯಜ್ಞಾನದೊಂದಿಗೆ ಘರ್ಜಿಸಿ, ಇವರಿಬ್ಬರಿಗೆ ಜನಿಸಿದ ಎಂಟನೇ ಮಗ ರಾಜ ಕಂಸ ಸಾವಿಗೆ ಕಾರಣ ಎಂದು ಭವಿಷ್ಯ ನುಡಿಯಿತು. ಇದನ್ನು ಕೇಳಿದ ಕಂಸ ಆಕ್ರೋಶಗೊಂಡನು. ದೇವಕಿ ಮತ್ತು ವಾಸುದೇವ ಅವರನ್ನು ತಕ್ಷಣ ಜೈಲಿಗೆ ಹಾಕುವಂತೆ ಆದೇಶಿಸಿದ್ದನು. ಅಲ್ಲದೆ, ದಂಪತಿಗೆ ಜನಿಸಿದ ಮೊದಲ ಆರು ಮಕ್ಕಳನ್ನು ಕೊಂದುಹಾಕಿದರು. ಅದೃಷ್ಟವಶಾತ್, ರಾಜಕುಮಾರಿ ದೇವಕಿಯ ಏಳನೇ ಮಗುವಾಗಿ ಬಲರಾಮ ಹುಟ್ಟಿದನು .ಆತ, ಗರ್ಭದಲ್ಲಿದ್ದಾಗಲೇ, ವೃಂದಾವನದ ರಾಜಕುಮಾರಿ ರೋಹಿಣಿಗೆ ಅತೀಂದ್ರಿಯವಾಗಿ ವರ್ಗಾಯಿಸಲಾಯಿತ್ತು.ಎಂಟನೇ ಮಗುವಿನ ಜನನದ ನಂತರ, ವೃಂದಾವನದಲ್ಲಿ ನಂದ ಮತ್ತು ಯಶೋಧರಿಗೆ ಮಗುವನ್ನು ನೀಡಲು ದೇವರುಗಳು ವಾಸುದೇವನಿಗೆ ಮಾರ್ಗದರ್ಶನ ನೀಡಿದರು. ವರ್ಷಗಳ ನಂತರ, ಶ್ರೀಕೃಷ್ಣನು ಕಂಸನನ್ನು ಕೊಂದು ಮಥುರಾ ಸಾಮ್ರಾಜ್ಯವನ್ನು ಕ್ರೌರ್ಯದ ಸಂಕೋಲೆಗಳಿಂದ ಮುಕ್ತಿಗೊಳಿಸಿದನು

 

ಜನ್ಮಾಷ್ಟಮಿ ವ್ರತ
ಹಲವು ಭಕ್ತರು ಜನ್ಮಾಷ್ಟಮಿ ದಿನದಂದು ಉಪವಾಸವನ್ನು ಆಚರಿಸುತ್ತಾರೆ.ಅಂದರೆ ಈ ವೇಳೆ ಹಣ್ಣುಗಳು ಮತ್ತು ನೀರನ್ನು ಮಾತ್ರ ಸೇವಿಸುತ್ತಾರೆ.

ಶ್ರೀ ಕೃಷ್ಣ ದೇಗುಲ ದರ್ಶನ
ಕೃಷ್ಣ ಜನ್ಮಾಷ್ಟಮಿಯಂದು ಭಗವಾನ್‌ ಶ್ರೀ ಕೃಷ್ಣನ ಆಶೀರ್ವಾದ ಪಡೆಯಲು ಜನರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಅಲ್ಲದೆ, ದೇವರಿಗೆ ಲಾಡು ಮುಂತಾದ ಸಿಹಿ ತಿಂಡಿಗಳನ್ನು ಅರ್ಪಣೆ ಮಾಡಲಾಗುತ್ತದೆ.

ಕೃಷ್ಣ ಮಂತ್ರ ಜಪ
ಜನ್ಮಾಷ್ಟಮಿ ವೇಳೆ ಎಲ್ಲೆಡೆ, ವಿಶೇಷವಾಗಿ ದೇವಾಲಯಗಳಲ್ಲಿ ಭಕ್ತಿ ವಾತಾವರಣ ಮೇಳಯಸಿರುತ್ತದೆ. ಮಂತ್ರಗಳನ್ನು ಪಠಿಸುವುದರ ಹೊರತಾಗಿ, ಭಗವಾನ್ ಶ್ರೀ ಕೃಷ್ಣನ ವಿಗ್ರಹಕ್ಕೆ ಹೂವುಗಳನ್ನು ಹಾಕಿ ಶ್ರೀಕೃಷ್ಣನ ಹೆಸರುಗಳನ್ನು ಜಪಿಸುವ ಆಚರಣೆಯೂ ಇದೆ. ಅನೇಕ ಸ್ಥಳಗಳಲ್ಲಿ, ಅಲಂಕೃತ ಜೋಕಾಲಿಗಳನ್ನು ಮರಗಳ ಮೇಲೆ ಕಟ್ಟಲಾಗುತ್ತದೆ.


ದಹಿ ಹಂಡಿ
ದಹಿ ಹಂಡಿ ಸಹ ಒಂದು ಆಚರಣೆಯಾಗಿದ್ದು, ಮಹಾರಾಷ್ಟ್ರದಲ್ಲಿ ಜನ್ಮಾಷ್ಟಮಿಯ ನಂತರದ ದಿನ ಈ ಉತ್ಸವವನ್ನು ಆಚರಿಸಲಾಗುತ್ತದೆ. ಹಬ್ಬದ ಅಂಗವಾಗಿ, ಜನರು ಪರಸ್ಪರರ ಮೇಲೆ ನಿಂತು ಮಾನವ ಪಿರಮಿಡ್ ನಿರ್ಮಿಸಿಕೊಳ್ಳುತ್ತಾರೆ ಮತ್ತು ನಿರ್ದಿಷ್ಟ ಎತ್ತರದಿಂದ ನೇತುಹಾಕಿರುವ ಮೊಸರು, ಸಕ್ಕರೆ ಮತ್ತು ಬೆಣ್ಣೆ ತುಂಬಿದ ಮಡಕೆಯನ್ನು ಒಡೆಯುತ್ತಾರೆ. ಮಗುವಾಗಿದ್ದಾಗ ಬೆಣ್ಣೆಯನ್ನು ಕದಿಯುತ್ತಿದ್ದರಿಂದ ಶ್ರೀ ಕೃಷ್ಣನನ್ನು ಮಖಾನ್ ಚೋರ್ (ಬೆಣ್ಣೆ ಕಳ್ಳ) ಎಂದು ಪ್ರೀತಿಯಿಂದ ಕರೆಯಲಾಗುತ್ತದೆ. ಈ ರೀತಿ ದಹಿ ಹಂಡಿ ಉತ್ಸವದ ಮೂಲಕ ಶ್ರೀಕೃಷ್ಣನಿಗೆ ಗೌರವ ಸಲ್ಲಿಸಲಾಗುತ್ತದೆ

ಇನ್ನೂ ವಿವಿಧೆಡೆ ಪೋಷಕರು ಮಕ್ಕಳಿಗೆ ಕೃಷ್ಣ, ರಾಧೆ,ರುಕ್ಮಿಣಿಯ ವೇಷ ಧರಿಸಿ ಪೋಟೋ ತೆಗೆಸುತ್ತಾರೆ.ಅಲ್ಲದೇ ಶಾಲೆಗಳಲ್ಲಿ ಆನೇಕ ಸ್ಪರ್ಧೆಗಳನ್ನು ನಡೆಸಿ ಬಹುಮಾನವನ್ನು ನೀಡುತ್ತಾರೆ.

ಹೀಗೆ ವಿವಿಧ ರೀತಿಯಲ್ಲಿ ಕೃಷ್ಣಾಷ್ಟಮಿಯನ್ನು ಆಚರಿಸಲಾಗುತ್ತದೆ.






ಗ್ರೀಷ್ಮಾ ಭಂಡಾರಿ
ಪ್ರಥಮ ಎಂ.ಎ
ಅರ್ಥಶಾಸ್ತ್ರ ವಿಭಾಗ
ವಿಶ್ವವಿದ್ಯಾನಿಲಯ ಕಾಲೇಜು
ಮಂಗಳೂರು


No comments:

Post a Comment