BhandaryVarthe Team

BhandaryVarthe Team
Bhandary Varthe Team

Monday 30 August 2021

ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಹತ್ವ-ರಮ್ಯಾ ಶ್ರೀಪಾಲ್ ಭಂಡಾರಿ ತೊಕ್ಕೊಟ್ಟು

 ಚಂದ್ರಮಾನ ಪಂಚಾಂಗ ರೀತ್ಯಾ ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ರೋಹಿಣಿ ನಕ್ಷತ್ರದಲ್ಲಿ ಶ್ರೀ ಕೃಷ್ಣನ ಜನ್ಮವಾಯಿತು . ಸೌರಮಾನ ಪಂಚಾಂಗ ರೀತ್ಯಾ ಸಿಂಹ ಮಾಸದಲ್ಲಿ ಶ್ರೀ ಕೃಷ್ಣನ ಜನ್ಮವಾಯಿತು. ಇದಲ್ಲದೆ ವರಾಹ ಪುರಾಣದ ಪ್ರಕಾರ ಶ್ರೀಕೃಷ್ಣನ ಜನ್ಮವು ಆಷಾಢ ಮಾಸದ ಶುಕ್ಲ ಪಕ್ಷದ ದ್ವಾದಶಿಯಂದು ಆಯಿತು. ಆ ಸಂದರ್ಭದಲ್ಲಿ ಚಂದ್ರಮಾನದ ಶ್ರಾವಣ ಮಾಸವೇ ಸೌರಮಾನದ ಸಿಂಹಮಾಸವಾಗಿತ್ತು. ಸಾಮಾನ್ಯವಾಗಿ ಶ್ರಾವಣ ಮಾಸದಲ್ಲಿಯೇ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುವುದು ವಾಡಿಕೆ .ದೇಶದ ವಿವಿಧ ಪ್ರದೇಶಗಳಲ್ಲಿ ತಮ್ಮದೇ ವೈಖರಿಯಲ್ಲಿ ಶ್ರೀಕೃಷ್ಣನನ್ನು ಆರಾಧಿಸುವರು ಪೂಜಿಸುವರು ಇದೇ ದಿನವನ್ನು ಗೋಕುಲಂ ಗೋಕುಲಾಷ್ಟಮಿಯೆಂದೂ , ಶ್ರೀಕೃಷ್ಣ ಜನ್ಮಾಷ್ಟಮಿಯಂದೂ , ಜನ್ಮಾಷ್ಟಮಿಯೆಂದೂ ಕರೆಯುವರು .


ವರಾಹ ಪುರಾಣದಲ್ಲಿ ಉಲ್ಲೇಖಿಸಿದಂತೆ ಅಂದು ರಾತ್ರಿ ಸ್ತ್ರೀಯು ಪತಿಯೊಡನೆ ಉಪವಾಸವಿದ್ದು ವ್ರತವನ್ನಾಚರಿಸಿದರೆ ಅವಳ ಹೃದಯದಲ್ಲಿ ಭಗವಂತನು ಕಾಣಿಸಿಕೊಳ್ಳುವನು ಅಂಥವರಿಗೆ ಒಳ್ಳೆಯ ಸಂತಾನ ಮತ್ತು ಸಂಪತ್ತು ದೊರೆಯುತ್ತದೆ ಎಂದು ಪುರಾಣದಲ್ಲಿ ಹೇಳಲಾಗಿದೆ. ತಿಥಿ ತತ್ತ್ವ ಎಂಬ ಗ್ರಂಥದಲ್ಲಿ ಜಯಂತಿಯ ಆಚರಣೆ ಬಗ್ಗೆ ಹೀಗೆ ಹೇಳಿದೆ ಜಯಂತಿ ಯೋಗವು ಒಂದು ದಿವಸ ಮಾತ್ರವಿದ್ದರೆ ಅಂದೇ ಉಪವಾಸ ಪೂಜೆಯನ್ನು ಮಾಡಬೇಕು. ಆ ಯೋಗವು ಎರಡು ದಿವಸ ಇದ್ದರೆ, ಎರಡನೇ ದಿನದಲ್ಲಿ ವ್ರತದ ಆಚರಣೆ ಮಾಡಬೇಕು ಜಯಂತಿ ಯೋಗವು ಇಲ್ಲದಿದ್ದರೆ ರೋಹಿಣಿ ನಕ್ಷತ್ರದಿಂದ ಕೂಡಿದ ಅಷ್ಟಮಿಯಂದು ವ್ರತವನ್ನಾಚರಿಸಬೇಕು ಎರಡು ದಿನಗಳಲ್ಲೂ ರೋಹಿಣಿ ನಕ್ಷತ್ರಕ್ಕೆ ಸೇರಿದ ಅಷ್ಟಮಿಯಿದ್ದರೆ ಉಪವಾಸವನ್ನು ಎರಡನೇ ದಿನದಲ್ಲಿ ಆಚರಿಸಬೇಕು ರೋಹಿಣಿ ನಕ್ಷತ್ರವು ಇಲ್ಲದಿದ್ದರೆ ಅರ್ಧ ರಾತ್ರಿಯಲ್ಲಿರುವ ಅಷ್ಟಮಿಯನ್ನು ಆಚರಿಸಬೇಕು . ತಿಥಿ ಯೋಗವಿಲ್ಲದಿದ್ದರೂ ಕೇವಲ ರೋಹಿಣಿ ನಕ್ಷತ್ರದಲ್ಲೇ ಪೂಜೆಯನ್ನು ಮಾಡಬೇಕು . ರೋಹಿಣಿ ನಕ್ಷತ್ರ ಮತ್ತು ಅಷ್ಟಮಿ ತಿಥಿ ಎರಡೂ ಒಟ್ಟಿಗೆ ಕೂಡಿ ಬರದಿದ್ದರೆ ಎರಡರಲ್ಲಿ ಯಾವುದಾದರೂ ಒಂದಕ್ಕೆ ಪ್ರಾಧನ್ಯ ಕೊಟ್ಟು ವ್ರತವನ್ನಾಚರಿಸಬೇಕು .

ಅವತಾರ ಪುರುಷ

ಶ್ರೀಮನ್ನಾರಾಯಣನ ದಶಾವತಾರಗಳಲ್ಲಿ ಒಂಭತ್ತನೆಯ ಅವತಾರವೇ ಶ್ರೀ ಕೃಷ್ಣ. ಮನುಷ್ಯರಂತೆ ವ್ಯವಹರಿಸಿ ಅಮೋಘವಾದ ಜ್ಞಾನ, ಬಲ, ಶಕ್ತಿ , ತೇಜಸ್ಸುಗಳನ್ನು ಮತ್ತು ಆತ್ಮ ಗುಣ ಸಂಪತ್ತನ್ನೂ ಪ್ರದರ್ಶಿಸಿದ ಪರಮಪುರುಷ ಗೋವುಗಳನ್ನು , ಗೋಪಾಲಕರನ್ನೂ , ಪಶು ,ಪಕ್ಷಿ ,ವೃಕ್ಷ , ವನಸ್ಪತಿಗಳನ್ನು ಸಂರಕ್ಷಿಸಿ ಉದ್ಧರಿಸಿದ ಪರಮಾತ್ಮ . ಮಹಾಭಾರತದ ಸೂತ್ರಧಾರ ಭಗವದ್ಗೀತೆಯ ಮೂಲಕ ಅಧ್ಯಾತ್ಮ ತತ್ವವನ್ನು ಉಪದೇಶಿಸಿದ ಯೋಗಾಚಾರ್ಯ. ಶ್ರೀ ಕೃಷ್ಣನು ಭಗವದ್ಗೀತೆಯಲ್ಲಿ ನೀತಿಯನ್ನೂ ಧರ್ಮವನ್ನೂ ಉಪದೇಶಿಸುತ್ತಾನೆ . ಮಧುರೆಯ ತಾಯಿ ಮತ್ತು ತಂದೆ ಸೆರೆಮನೆಯಲ್ಲಿರುವಾಗ ಅಲ್ಲಿ ಹುಟ್ಟಿದ ವಸುದೇವ -- ದೇವಕಿ ಕುಟುಂಬದ ಎಂಟನೇ ಮಗು ಶ್ರೀವಾಸುದೇವ. ಗೋಕುಲದಲ್ಲಿ ಯಶೋದೆಯ ಮುದ್ದು ಪೋರನಾಗಿ ಬೆಳೆದು ಅಕ್ಕ ಪಕ್ಕದ ಮನೆಯಲ್ಲಿಹ ಬೆಣ್ಣೆ ಕದ್ದು ತಿಂದು ತುಂಟತನದಲ್ಲಿ ಮಕ್ಕಳಿಗೆ ಗುರುವಾಗಿದ್ದ .


ಅಷ್ಟೇ ಅಲ್ಲದೆ ಬಾಯಲ್ಲಿ ಮಣ್ಣು ಹಾಕಿಕೊಂಡು ತನ್ನ ತಾಯಿಗೆ ವಿಶ್ವರೂಪ ದರ್ಶನ ಮಾಡಿಸಿದ ವಿಶ್ವರೂಪಿ . ಜಾಂಬವಂತನಿಂದ ಸ್ಯಮಂತಕ ಮಣಿಯನ್ನು ಪಡೆದ ದೈವರೂಪಿ. ವಾಸುಕಿ ಎಂಬ ಕಾಳಸರ್ಪವನ್ನು ಸಂಹರಿಸಿ ಜನಗಳನ್ನು ಸಂರಕ್ಷಿಸಿದವನು . ಬಲರಾಮನ ತಮ್ಮ ಮತ್ತು ಕುಚೇಲನ ಆಪ್ತ ಮಿತ್ರ .
ಇವನಿಗೆ ಅವಲಕ್ಕಿ ಬಹು ಪ್ರಿಯವಾದ ತಿನಿಸು .








ರಮ್ಯಾ ಶ್ರೀಪಾಲ್ ಭಂಡಾರಿ ತೊಕ್ಕೊಟ್ಟು


No comments:

Post a Comment