BhandaryVarthe Team

BhandaryVarthe Team
Bhandary Varthe Team

Wednesday 10 November 2021

ಕುಲ ವೃತ್ತಿಯಲ್ಲಿ ಕೀಳರಿಮೆ ಬೇಡ ಮಾನ್ಯ ಗೃಹ ಸಚಿವರು

 ನವೆಂಬರ್ 9ರಂದು ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ ಹಾಗೂ ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಸವಿತಾ ಸಮಾಜದ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ಸಾಧಕರಿಗೆ ಸನ್ಮಾನ ಹಾಗೂ ಕಾರ್ಮಿಕರ ನೊಂದಾವಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು , ಬೆಳ್ತಂಗಡಿ ತಾಲೂಕು ಶಾಸಕರಾದ ಮಾನ್ಯ ಹರೀಶ್ ಪೂಂಜರವರು, ಕಚ್ಚೂರು ನಾಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕಡಂದಲೆ ಸುರೇಶ್ ಭಂಡಾರಿ, ಭಂಡಾರಿ ಮಹಾಮಂಡಲದ ಅಧ್ಯಕ್ಷರಾದ ಸದಾಶಿವ ಭಂಡಾರಿ ಸಕಲೇಶಪುರ, ಬೆಳ್ತಂಗಡಿ ಭಂಡಾರಿ ಸಂಘದ ಅಧ್ಯಕ್ಷ ಉಮೇಶ್ ಭಂಡಾರಿ, ಭಂಡಾರಿ ಸಮಾಜ ಸಂಘದ ಗೌರವಾಧ್ಯಕ್ಷ ಎ.ಪೂವಪ್ಪ ಭಂಡಾರಿ, ಸವಿತಾ ಸಮಾಜದ ಅಧ್ಯಕ್ಷ ಗೋಪಾಲ ಭಂಡಾರಿ, ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಬಿಎಂಎಸ್ ಬೆಳ್ತಂಗಡಿ ಅಧ್ಯಕ್ಷ ಉದಯ ಕುಮಾರ್ ಬಿ.ಕೆ. ಮಡಂತ್ಯಾರು ಅಶೋಕ್ ಭಂಡಾರಿ ಇವರುಗಳು ಉಪಸ್ಥಿತರಿದ್ದರು.

 

ಮಾನ್ಯ ಸಚಿವರು ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಸವಿತಾ ಸಮಾಜ ತಮ್ಮ ವೃತ್ತಿ ಜೀವನದೊಂದಿಗೆ ರಾಷ್ಟ್ರೀಯತೆಗೆ ಒತ್ತು ಕೊಟ್ಟವರು. ನೀವು ವೃತ್ತಿಯ ಜೊತೆಗೆ ತಂತ್ರಜ್ಞಾನವನ್ನು ಅಧ್ಯಯನ ಮಾಡಿ ವೃತ್ತಿಯಲ್ಲಿ ನೈಪುಣ್ಯತೆ ಗಳಿಸಿಕೊಳ್ಳಬೇಕು, ದುಡಿದು ತಿನ್ನುವವರಿಗೆ ಕೀಳರಿಮೆ ಬೇಡ ಹಿರಿಯರ ವೃತ್ತಿಯನ್ನು ಇಂದಿನ ಯುವಕರು ಮುಂದುವರಿಸಲು ಹಿಂಜರಿಯಬಾರದು ಎಂಬ ಸಲಹೆ ನೀಡಿದರು.

ಮಾನ್ಯ ಶಾಸಕರು ಭಂಡಾರಿ ಸಮಾಜದ ಸಮುದಾಯ ಭವನಕ್ಕೆ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿ ಮಂಜೂರಾಗಿದೆ, ಈ ಭವನ ನಿರ್ಮಿಸಿ ಅದರಿಂದ ಬಂದ ಆದಾಯದಲ್ಲಿ ಶಿಕ್ಷಣಕ್ಕೆ ಮತ್ತು ನಿರುದ್ಯೋಗಿಗಳಿಗೆ ನೆರವು ನೀಡುವಂತಾಗಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದರು.

ಬಿಎಂಎಸ್ ಅಧ್ಯಕ್ಷರಾದ ಉದಯ ಕುಮಾರ್ ಇವರು ಸರ್ಕಾರದ ಕಾರ್ಮಿಕ ಇಲಾಖೆಯಿಂದ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು

ಕಾರ್ಯಕ್ರಮದಲ್ಲಿ ಸಾಧಕರಾದ ಎ ಪೂವಪ್ಪ ಭಂಡಾರಿ ದಂಪತಿ, ಜಿಲ್ಲಾ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕ ಶಿವಾನಂದ ಭಂಡಾರಿ, ಪೋಲೀಸ್ ಸೇವೆಯಲ್ಲಿ ಪದೋನ್ನತಿ ಪಡೆದ ವಿಜಯೇಂದ್ರ ಭಂಡಾರಿ , ಕೆಎಸ್ಸಾರ್ಟಿಸಿ ನಿವೃತ್ತ ನಿರ್ವಾಹಕ ಯುವರಾಜ ಭಂಡಾರಿ ಇವರೆಲ್ಲರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಸತೀಶ್ ಇವರ ಪ್ರಾರ್ಥನೆ ಮತ್ತು ಸಂಘದ ಗೌರವಾಧ್ಯಕ್ಷರಾದ ಎ ಪೂವಪ್ಪ ಭಂಡಾರಿ ಇವರ ಸ್ವಾಗತದೊಂದಿಗೆ ಪ್ರಾರಂಭಿಸಿ, ಕಳೆಂಜ ಗ್ರಾಮ ಪಂಚಾಯತ್ ಸದಸ್ಯರಾದ ಗಂಗಾಧರ ಭಂಡಾರಿ ಮತ್ತು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿ ನಾರಾಯಣ ಭಂಡಾರಿ ಇವರ ನಿರೂಪಣೆಯೊಂದಿಗೆ ವಿಶ್ವನಾಥ ಭಂಡಾರಿಯವರ ಧನ್ಯವಾದಗಳೊಂದಿಗೆ ಮುಕ್ತಾಯ ಗೊಂಡಿತ್ತು.

ವರದಿ : ಶ್ರೀಮತಿ ವನಿತಾ ಅರುಣ್ ಭಂಡಾರಿ, ಬಜ್ಪೆ

No comments:

Post a Comment